ಪ್ರಕಟಣೆಯ ಕೃಪೆಗಾಗಿ ಜಿಎಂಐಟಿಯಲ್ಲಿ ಎಂಬಿಎ ವಿಭಾಗದ ವಿದ್ಯಾರ್ಥಿಗಳಿಗೆ ಉದ್ಯೋಗ ಕೌಶಲ್ಯ ಕಾರ್ಯಗಾರ

ದಾವಣಗೆರೆ: ನಗರದ ಪ್ರತಿಷ್ಠಿತ ಜಿಎಂ ತಾಂತ್ರಿಕ ಮಹಾವಿದ್ಯಾಲಯದ ಎಂಬಿಎ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಐದು ದಿನಗಳ ಉದ್ಯೋಗ ಕೌಶಲ್ಯ ಕಾರ್ಯಗಾರದ ಉದ್ಘಾಟನೆಯನ್ನು ನೆರವೇರಿಸಲಾಯಿತು. ಈ ಕಾರ್ಯಗಾರವನ್ನು ಪುಣೆ ಮೂಲದ ಪ್ರತಿಷ್ಠಿತ ಗ್ಲೋಬಲ್ ಟ್ಯಾಲೆಂಟ್ ಟ್ರ್ಯಾಕ್ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಗಾರದ ಉದ್ಘಾಟನೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ ವೈ ವಿಜಯಕುಮಾರ್ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ನಂತರ ಮಾತನಾಡಿದ ಇವರು ಮ್ಯಾನೇಜ್ಮೆಂಟ್ ವಿದ್ಯಾರ್ಥಿಗಳಿಗೆ ಇರಬೇಕಾದ ಎಲ್ಲಾ ಅರ್ಹತೆಗಳನ್ನು ಗಳಿಸಿಕೊಳ್ಳುವುದರ ಮೂಲಕ ನಿರ್ವಹಣೆ ಕೌಶಲ್ಯತೆಯನ್ನು ಹೆಚ್ಚಿಸಿಕೊಳ್ಳಬೇಕು ಮತ್ತು ನಿಮ್ಮ ಕಿರಿಯ ವಿದ್ಯಾರ್ಥಿಗಳಿಗೆ ಮಾದರಿಯಾಗಿ ಸಲಹೆ ಸೂಚನೆಗಳ ಮೂಲಕ ಅವರನ್ನು ಕೈಗಾರಿಕೆಗಳಿಗೆ ತಯಾರು ಮಾಡುವ ಜವಾಬ್ದಾರಿಯುತ ಸ್ಥಾನವನ್ನು ತೆಗೆದುಕೊಳ್ಳಬೇಕೆಂದು ಕರೆಕೊಟ್ಟರು.
ವಿಭಾಗದ ನಿರ್ದೇಶಕರಾದ ಡಾ ಬಕ್ಕಪ್ಪ ಬಿ ಮಾತನಾಡಿ ಎಂಬಿಎ ವಿದ್ಯಾರ್ಥಿಗಳಿಗೆ ಅನೇಕ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ವಿದ್ಯಾರ್ಥಿಗಳು ಆಸಕ್ತಿಯಿಂದ ಪಾಲ್ಗೊಂಡು ತಮ್ಮ ಬುದ್ಧಿಶಕ್ತಿಯನ್ನು ಹೆಚ್ಚಿಸಿಕೊಳ್ಳಬೇಕು ಮತ್ತು ಇತರರೊಂದಿಗೆ ಸ್ಪರ್ಧಿಸಬೇಕೆಂದು ಹೇಳಿದರು. ಈ ಸ್ಪರ್ಧಾತ್ಮಕ ಯುಗದಲ್ಲಿ ಬುದ್ಧಿಯುಳ್ಳ ವ್ಯಕ್ತಿಗೆ ಮಾತ್ರ ಸ್ಥಾನ, ಅದನ್ನು ಅರಿತು ಸರಿಯಾದ ರೀತಿಯಲ್ಲಿ ನಡೆದರೆ ಯಶಸ್ಸು ಖಂಡಿತ ಎಂದು ತಿಳಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಶ್ರೀಮತಿ ರಾಧಿಕಾ ಬಾನು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ತರಬೇತಿ ಮತ್ತು ಉದ್ಯೋಗ ವಿಭಾಗದ ಮುಖ್ಯಸ್ಥರಾದ ಶ್ರೀ ತೇಜಸ್ವಿ ಕಟ್ಟಿಮನಿ ಟಿ ಆರ್, ಎಂಬಿಎ ವಿಭಾಗದ ಮುಖ್ಯಸ್ಥರಾದ ಡಾ ಪ್ರಶಾಂತ್ ಕುಮಾರ್, ವಿಭಾಗದ ಸಂಯೋಜಕರಾದ ಶ್ರೀ ವಿನಯ್ ಐ ಹಾಗೂ ಪ್ರಾಧ್ಯಾಪಕರುಗಳು ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.