ದೇವರ ಹೆಸರಲ್ಲಿ ಮಹಿಳೆಯೊಬ್ಬರಿಗೆ 120 ಗ್ರಾಂ ಬಂಗಾರದ ಒಡವೆ ವಂಚಿಸಿದ್ದ ಪೂಜಾರಿಯ ಬಂಧನ

IMG-20211209-WA0016

 

ದಾವಣಗೆರೆ: ದೇವರ ಹೆಸರಲ್ಲಿ ಮಹಿಳೆಯೊಬ್ಬರಿಗೆ ವಂಚಿಸಿದ್ದ ಆರೋಪಿಯನ್ನು ಬಂಧಿಸಿರುವ ಹೊನ್ನಾಳಿ ಪೊಲೀಸರು, ಆರೋಪಿತನಿಂದ 120 ಗ್ರಾಂ ಬಂಗಾರದ ಒಡವೆಗಳನ್ನು ವಶಕ್ಕೆ ಪಡೆದಿದ್ದಾರೆ.

ಹೊನ್ನಾಳಿ ಪಟ್ಟಣದ ದೇವಸ್ಥಾನದಲ್ಲಿ ಪೂಜಾರಿಯಾಗಿದ್ದ ಚಂದ್ರು ಅಲಿಯಾಸ್ ಚಂದ್ರಪ್ಪ (31) ಬಂಧಿತ ಆರೋಪಿ. ಪೊಲೀಸರು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಆರೋಪಿ ಚಂದ್ರು ಮಹಿಳೆಯೊಬ್ಬರಿಗೆ ನಿಮ್ಮ ಗಂಡನಿಗೆ ಗಂಡಾಂತರವಿದೆ, ದೇವಸ್ಥಾನದಲ್ಲಿ ಪೂಜೆ ಮಾಡಿದರೆ ಎಲ್ಲವೂ ಸರಿಹೋಗುತ್ತದೆಂದು ನಂಬಿಸಿ, ಆಕೆಯಿಂದ ಒಡವೆ, ಹಣ ಪಡೆದು ವಂಚಿಸಿದ್ದು, ಆಕೆ ಹೊನ್ನಾಳಿ ಠಾಣೆಗೆ ದೂರು ನೀಡಿದ್ದರು.

ಚನ್ನಗಿರಿ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕರು ಸಂತೋಷ್ ಕೆ.ಎಂ ಅವರ ಮಾರ್ಗದರ್ಶನದಲ್ಲಿ ಹೊನ್ನಾಳಿ ವೃತ್ತ ನಿರೀಕ್ಷಕ ಟಿ.ವಿ. ದೇವರಾಜ್ ನೇತೃತ್ವದಲ್ಲಿ ಹೊನ್ನಾಳಿ ಠಾಣೆಯ ಪಿಎಸ್ಐ ಬಸವರಾಜ ಬಿರಾದಾರ ಹಾಗೂ ಸಿಬ್ಬಂದಿಗಳ ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!