3 ಎಕರೆಯಲ್ಲಿ ಬೆಳೆದಿದ್ದ ಅಡಿಕೆ ಹಾಗೂ ಪಪ್ಪಾಯಿ ಗಿಡಗಳನ್ನು ಕಡಿದ ದುಷ್ಕರ್ಮಿಗಳು
![Adike & popaye](https://garudavoice.com/wp-content/uploads/2021/12/Adike-popaye.jpg)
ದಾವಣಗೆರೆ: ಯಾವುದೋ ವೈಷಮ್ಯಕ್ಕೆ ದುಷ್ಕರ್ಮಿಗಳು ಮೂರು ಎಕರೆ ಜಾಗದಲ್ಲಿ ಬೆಳೆದಿದ್ದ ಅಡಿಕೆ ಮರ, ಪಪ್ಪಾಯಿ ಗಿಡಗಳನ್ನು ರಾತ್ರೋರಾತ್ರಿ ಕಡಿದು ಹಾಕಿರುವ ಘಟನೆ ತಾಲ್ಲೂಕಿನ ಬೋರಗೊಂಡನಹಳ್ಳಿಯಲ್ಲಿ ನಡೆದಿದೆ.
ಎಸ್.ಎನ್. ತಿಪ್ಪೇಸ್ವಾಮಿ ಎಂಬುವವರಿಗೆ ಸೇರಿದ ಜಮೀನಿನಲ್ಲಿ ಈ ಕೃತ್ಯ ಎಸಗಲಾಗಿದ್ದು, ಸುಮಾರು 10 ಲಕ್ಷ ರು., ನಷ್ಟ ಸಂಭವಿಸಿರುವುದಾಗಿ ತಿಪ್ಪೇಸ್ವಾಮಿ ಅಳಲು ತೋಡಿಕೊಂಡಿದ್ದಾರೆ.
ಪ್ರಕರಣ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿದೆ.