ವಿಚಾರಣೆಗೆ ಕರೆ ತಂದಿದ್ದ ವ್ಯಕ್ತಿ ಸಾವು.! ಉದ್ರಿಕ್ತರಿಂದ ಠಾಣೆಯ ಪೀಠೋಪಕರಣ, ಜೀಪ್, ಧ್ವಜ ಸ್ಥಂಭಕ್ಕೆ ಹಾನಿ.!

ದಾವಣಗೆರೆ: ಓಸಿ ಆಡಿಸುತ್ತಿದ್ದ ಎಂಬ ಆರೋಪದ ಮೇಲೆ ಚನ್ನಗಿರಿ ಪೊಲೀಸ್ ಠಾಣೆಗೆ ಕರೆತಂದಿದ್ದ ಆರೋಪಿ ಮೃತಪಟ್ಟ ಹಿನ್ನೆಲೆ ಆಕ್ರೋಶಗೊಂಡ ಸಂಬಂಧಿಕರು ಪೊಲೀಸ್ ಠಾಣೆ ಮೇಲೆ ಕಲ್ಲುತೂರಾಟ ನಡೆಸಿದ್ದಾರೆ.
ಈ ಸಮಯದಲ್ಲಿ ಸುಮಾರು ಮೂರು ಸಾವಿರ ಜನ ಸೇರಿದ್ದು, ಖಾಕಿ ಪಡೆ ಸಾರ್ವಜನಿಕರನ್ನು ತಡೆಯಲು ಹರಸಾಹಸ ಪಟ್ಟಿದ್ದಾರೆ ಎನ್ನಲಾಗಿದೆ.

ಟಿಪ್ಪು ನಗರದ ನಿವಾಸಿ ಆದಿಲ್ (32) ಮೃತ ವ್ಯಕ್ತಿಯಾಗಿದ್ದು, ಮಟ್ಕಾ (ಒಸಿ) ಆಡಿಸುತ್ತಿದ್ದಾರೆ ಎಂದು ಪೊಲೀಸರು ಕರೆ ತಂದಿದ್ದರು. ಸಂಜೆ ಠಾಣೆಗೆ ಕರೆತಂದಿದ್ದಾಗ ಕಡಿಮೆ ರಕ್ತದೊತ್ತಡ ಆಗಿ ಅವರು ಕುಸಿದುಬಿದ್ದರು. ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ. ಇದಾದ ಬಳಿಕ ಠಾಣೆಯ ಮುಂದೆ ಜಮಾಯಿಸಿದ ವ್ಯಕ್ತಿಯ ಸಂಬಂಧಿಕರು, ಒಳನುಗ್ಗಿ ವಸ್ತುಗಳನ್ನು ಧ್ವಂಸಗೊಳಿದ್ದಾರೆ. ಜೀಪ್‌ ಹಾನಿಗೊಳಿಸಿದ್ದಾರೆ ಎನ್ನಲಾಗುತ್ತಿದೆ.

ಚನ್ನಗಿರಿ ಡಿವೈಎಸ್ಪಿ ಪ್ರಶಾಂತ್, ಅಧಿಕಾರಿಗಳು ಸಂಬಂಧಿಕ ರನ್ನು ಸಮಾಧಾನಪಡಿಸಿದರು. ಆದರೆ ಪ್ರತಿಭಟನಾಕಾರರು ಯಾರ ಮಾತನ್ನು ಕೇಳಲಿಲ್ಲ.  ಇದೊಂದು ಲಾಕಪ್‌ ಡೆತ್‌ ಎಂದು ಆರೋಪಿಸಿದ ಗುಂಪುವೊಂದು ಪೊಲೀಸ್ ಠಾಣೆಗೆ ನುಗ್ಗಿ, ಕಲ್ಲು ತೂರಾಟ ನಡೆಸಿ ಪೀಠೊಪಕರಣ ಧ್ವಂಸಗೊಳಿಸಿದ್ದಾರೆ ಎನ್ನಲಾಗುತ್ತಿದೆ,
ಪಟ್ಟಣದ ಟಿಪ್ಪು ನಗರದ ನಿವಾಸಿ ಆದಿ️ಲ್‌(32) ಎಂಬಾತ ಕಾರ್ಪೆಂಟರ್‌ ಕೆಲಸ ಮಾಡುತ್ತಿದ್ದ. ಒಸಿ ಆಡಿಸುತ್ತಿದ್ದ ಎಂಬ ಆರೋಪ ಇತ್ತು. ಶುಕ್ರವಾರ ರಾತ್ರಿ 8.30ರ ಸುಮಾರಿಗೆ ಚನ್ನಗಿರಿ ಠಾಣೆ ಪೊಲೀಸರು ವಿಚಾರಣೆಗಾಗಿ ಕರೆ ತಂದಿ️ದ್ದರು. ಕೆಲ ಹೊತ್ತಿನ ಬಳಿಕ ಆದಿ️ಲ್‌ ಕುಸಿದು ಬಿದ್ದಿದ್ದಾನೆ . ತಕ್ಷಣವೇ ಆಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆ ಫ‌ಲಿಸದೆ ಮೃತಪಟ್ಟಿದ್ದಾನೆ.

ಆದಿ️ಲ್‌ಗೆ ಫಿಟ್ಸ್‌, ಲೋ ಬಿಪಿ ಆಗಿದ್ದರಿಂದ ಕುಸಿದು ಬಿದ್ದು ಮೃತಪಟ್ಟಿದ್ದಾನೆ ಎಂದು ಪೊಲೀಸರು ಹೇಳುತ್ತಿದ್ದಾರೆ. ಆದರೆ, ಕುಟುಂಬಸ್ಥರು ಪೊಲೀಸರು ಹೊಡೆದು ಹತ್ಯೆ ಮಾಡಿದ್ದಾರೆ. ಇದು ಲಾಕಪ್‌ ಡೆತ್‌ ಎಂದು ಪೊಲೀಸ್ ಠಾಣೆಗೆ ನುಗ್ಗಿ ಗಲಾಟೆ ನಡೆಸಿದ್ದಾರೆ. ಕಲ್ಲು ತೂರಿ, ಪಿಠೋಪಕರಣ ಧ್ವಂಸ ಮಾಡುತ್ತಿದ್ದಂತೆ ಪರಿಸ್ಥಿತಿ ನಿಯಂತ್ರಿಸಲು ಅಶ್ರುವಾಯು ಸಿಡಿಸಿ, ಲಘು ಲಾಠಿ ಪ್ರಹಾರ ನಡೆಸಲಾಗಿದೆ.
ತಡರಾತ್ರಿ ಠಾಣೆ ಎದುರು ಜಮಾಯಿಸಿ ಆದಿ️ಲ್‌ ಮೃತದೇಹವಿಟ್ಟು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಲ್ಲು ತೂರಾಟಕ್ಕೆ ಮೂರು ಪೊಲೀಸ್‌ ಜೀಪ್‌ ಗಳಿಗೆ ಹಾನಿ ಮಾಡಲಾಗಿದೆ. ಬಂದೋಬಸ್ತ್ ಬಂದಿ️ದ್ದ ಮಾಯಕೊಂಡ ಠಾಣೆ ಇನ್ಸ್ ಪೆಕ್ಟರ್‌ ಜೀಪನ್ನ ಧ್ವಂಸ ಮಾಡಿದ್ದಾರೆ. ಠಾಣೆಯ ಕಿಟಕಿ ಗಾಜುಗಳ ಒಡೆದು ಹಾಕಿದ್ದು, ಠಾಣೆ ಎದುರಿದ್ದ ಧ್ವಂಜ ಸ್ಥಂಭವನ್ನು ಕಿತ್ತೆಸೆದಿ️ದ್ದಾರೆ. ಠಾಣೆಯೊಳಗೆ ನುಗ್ಗಿ ಅಲ್ಲಿನ ಪೀಠೊಪಕರಣ ಮುರಿದಿದ್ದಾರೆ.
ಈ ವೇಳೆ ಪೊಲೀಸರು ಅಶ್ರುವಾಯು ಸಿಡಿಸಿ ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಪ್ರಮುಖ ಮುಖಂಡರ ಜತೆ ಮಾತುಕತೆ ನಡೆಸಿದ್ದಾರೆ. ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದ್ದು, ಪರಿಸ್ಥಿತಿ ಬೂದಿ️ ಮುಚ್ಚಿದ ಕೆಂಡದಂತಿದೆ. ಸ್ಥಳಕ್ಕೆ ದಾವಣಗೆರೆ ಎಸ್ಪಿ ಉಮಾಪ್ರಶಾಂತ್, ಶಿವಮೊಗ್ಗ ಎಸ್ಪಿ ಮಿಥುನ್ ಕುಮಾರ್ ಸೇರಿದಂತೆ ಬೇರೆ ಜಿಲ್ಲೆಯ ಪೊಲೀಸರು ಆಗಮಿಸಿದ್ದು, ಬಿಗಿ-ಬಂದೋಬಸ್ತ್ ಕೈಗೊಳ್ಳಲಾಗಿದೆ.

Leave a Reply

Your email address will not be published. Required fields are marked *

error: Content is protected !!