‘ನನ್ನ ಸಾವಿಗೆ ಪೊಲೀಸರೇ ಕಾರಣ’ ಎಂದು ಗೋಡೆ ಮೇಲೆ ಬರೆದು ವ್ಯಕ್ತಿ ನೇಣಿಗೆ ಶರಣು..!!

IMG-20211117-WA0095

 

ಚಿತ್ರದುರ್ಗ ( ಹಿರಿಯೂರು ): ವ್ಯಕ್ತಿಯೋರ್ವ ಗೋಡೆ ಮೇಲೆ ”ನನ್ನ ಸಾವಿಗೆ ಪೊಲೀಸರೇ ಕಾರಣ’ ಎಂದು ಬರೆದು, ಲುಂಗಿಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಹಿರಿಯೂರು ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಹಿಂಬಾಗದ ಕಟ್ಟಡದಲ್ಲಿ ನಡೆದಿದೆ.

ಗೋಡೆ ಮೇಲೆ ಬರೆದ ಬರಹ

 

ಮೃತ ವ್ಯಕ್ತಿಯನ್ನು ಚಿತ್ರದುರ್ಗ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದ ನಿವಾಸಿ ವೆಂಕಟೇಶ್ (30) ಎಂದು ಗುರುತಿಸಲಾಗಿದೆ.

ಮೃತ ವೆಂಕಟೇಶ್ ಗ್ಯಾರೇಜ್‌ನಲ್ಲಿ ಕೆಲಸ ಮಾಡಿಕೊಂಡಿದ್ದನು. ಆತ ಕುಡಿತದ ದುಶ್ಚಟಕ್ಕೆ ಒಳಗಾಗಿ ರಾತ್ರಿ ವೇಳೆ ಬಸ್ ನಿಲ್ದಾಣ ಸೇರಿದಂತೆ ಎಲ್ಲೆಂದರಲ್ಲಿ ತಂಗುತ್ತಿದ್ದ. ಕಳೆದ ಎರಡು ತಿಂಗಳಿನಿಂದ ಮನೆಗೆ ಬಂದಿರಲಿಲ್ಲ. ಆತನಿಗೆ ಮದುವೆ ಮಾಡಲು ಹುಡುಗಿ ನೋಡುತ್ತಿದ್ದೆವು ಎಂದು ಮೃತನ ಸಂಬಂಧಿಕರು ತಿಳಿಸಿದ್ದಾರೆ.

ವೆಂಕಟೇಶನ ಮೃತ ದೇಹವನ್ನು ಹಿರಿಯೂರು ಸಾರ್ವಜನಿಕ ಆಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿದೆ.ಹಿರಿಯೂರು ನಗರದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!