ಪ್ರಕ್ಷುಬ್ಧ ಶಮನಗೊಳಿಸಿದ ಪೊಲೀಸ್ ಇಲಾಖೆಯ ಕಾರ್ಯವೈಖರಿ ಶ್ಲಾಘನೀಯ: ಅಪ್ಸರ್ ಕೊಡ್ಲಿಪೇಟೆ

sdpi apsar kodlipte

ದಾವಣಗೆರೆ: ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದಾವಣಗೆರೆ ಜಿಲ್ಲಾ ಸಮಿತಿ ವಿಶೇಷ ಸಭೆಯು ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ಹಾಗೂ ರಾಜ್ಯ ಸಮಿತಿ ಸದಸ್ಯರು ಮತ್ತು ಹೈ ಕೋರ್ಟ್ ವಕೀಲರಾದ ಮಜೀದ್ ಖಾನ್ ರವರ ಉಪಸ್ಥಿತಿಯಲ್ಲಿ ಮತ್ತು ಉಪಾಧ್ಯಕ್ಷರಾದ ರಜ್ವಿ ರಿಯಾಜ್ ಅಹಮದ್ ರವರ ಅಧ್ಯಕ್ಷತೆಯಲ್ಲಿ ದಾವಣಗೆರೆಯ ಜಿಲ್ಲಾ ಕಚೇರಿಯಲ್ಲಿ ಜರುಗಿತು.

ಪ್ರಾಸ್ತಾವಿಕವಾಗಿ ಮಾತನಾಡಿದ ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ಅವರು, ಧಾರ್ಮಿಕ ಸಹಿಷ್ಣುತೆಯ ಗುಣವು ನಮ್ಮ ಶರಣರು, ಸೂಪಿಗಳ ಪರಂಪರೆಯಲ್ಲಿದೆ. ಹೀಗಾಗಿ ರಾಷ್ಟ್ರದ ಪ್ರಗತಿಗೆ ಸಾಮರಸ್ಯದ ಆಚರಣೆಗಳು ಅಗತ್ಯವಾಗಿವೆ ಎಂದರು.

ಎಲ್ಲಾ ಧರ್ಮಗಳ ಹಬ್ಬಗಳು ಕೋಮು ಸೌಹಾರ್ದತೆಯ ಪ್ರತೀಕವಾಗಿದ್ದು ಎಲ್ಲರೂ ಕೂಡಿ ಹಬ್ಬ ಹರಿದಿನಗಳನ್ನು ಆಚರಿಸಿದರೆ ಸಮಾಜದಲ್ಲಿ ಶಾಂತಿ ಸದಾಕಾಲ ನೆಲೆಸಲಿದೆ ಮತ್ತು ಪರಸ್ಪರರಲ್ಲಿ ಪ್ರೀತಿ, ಸ್ನೇಹ ಹಾಗೂ ಸೌಹಾರ್ಧತೆ ಭಾವನೆ ಹೆಚ್ಚುವುದು. ಆದರೆ ಇದಕ್ಕೆ ಅಪವಾದ ಎಂಬAತೆ ದಾವಣಗೆರೆಯಲ್ಲಿ ಕೆಲವು ದಾವಣಗೆರೆ ನಗರದ ಬೇತೂರು ರಸ್ತೆ ಗಣೇಶ ವಿಸರ್ಜನಾ ಮೆರವಣಿಗೆಯಲ್ಲಿ ಗಲಾಟೆ ನಡೆದು ನಗರದಲ್ಲಿ ಅಶಾಂತಿ ಸೃಷ್ಟಿ ಆಗಿರುತ್ತದೆ. ಇದಕ್ಕೂ ಮುಂಚೆ ಅಹಮದ್ ನಗರ ಧ್ವಜ ಕಟ್ಟುವ ವಿಚಾರದಿಂದ ಹಿಡಿದು ಕೆಲವೊಂದು ವಿಚಾರವನ್ನು ಹೊರತುಪಡಿಸಿ ಪ್ರಕ್ಷುಬ್ಧತೆಯಲ್ಲಿದ್ದ ನಗರವನ್ನು ಶಾಂತಿಯುತ ಗೊಳಿಸುವಲ್ಲಿ ಪೋಲೀಸ್ ಇಲಾಖೆಯ ಕಾರ್ಯವೈಖರಿ ಶ್ಲಾಘನೆಗೆ ಅರ್ಹವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಬಿಜೆಪಿ ರಾಜಕೀಯ ಲಾಭಕ್ಕಾಗಿ ರಾಜ್ಯ ಸೇರಿದಂತೆ ಜಿಲ್ಲೆಯಲ್ಲಿ ಅಶಾಂತಿ ಸೃಷ್ಟಿಸಲು ಪಿತೂರಿ ನಡೆಸುತ್ತಿದೆ, ಕ್ರಮ ಕೈಗೊಳ್ಳಬೇಕಾಗಿದ್ದ ಕಾಂಗ್ರೆಸ್ ಸರ್ಕಾರ ನಿರ್ಲಕ್ಷವೇ ತಾಳುತ್ತಿರುವುದೇ ಪ್ರಕ್ಷುಬ್ಧತೆಗೆ ಕಾರಣವಾಗುತ್ತಿದೆ, ಹೊನ್ನಳ್ಳಿಯ ಮಾಜಿ ಶಾಸಕರಾದ ರೇಣುಕಾಚಾರ್ಯ ಬಂದು ಬೇತೂರು ರಸ್ತೆಯ ಗಲಾಟೆಗೆ ಸಂಬAಧಿಸಿದAತೆ ೩ ಜನರನ್ನು ಬಿಡಿಸಿದ್ದಾರೆ ಎಂಬ ಸುದ್ದಿ ಪತ್ರಿಕೆಗಳಲ್ಲಿ ವರದಿಯಾಗಿರುತ್ತದೆ ಇದರ ಸತ್ಯ ಸತ್ಯತೆಯನ್ನು ಪೊಲೀಸ್ ಇಲಾಖೆ ಜನಸಾಮಾನ್ಯರಿಗೆ ತಿಳಿಸಬೇಕು ಆಗ್ರಹಿಸಿದರು.

ಈಗ ನಗರದಲ್ಲಿ ಶಾಂತಿ ನೆಲೆಸಿದ್ದು, ಈ ವಿಚಾರದಲ್ಲಿ ಯಾವುದೇ ಅಮಾಯಕರನ್ನು ಬಂಧಿಸದAತೆ, ಹಾಗೂ ಒಂದು ವೇಳೆ ಬಂಧಿಸಿದರೆ ಅವರನ್ನು ವಿಚಾರಣೆ ಮಾಡಿ ಶೀಘ್ರವಾಗಿ ಬಿಡುಗಡೆಗೊಳಿಸಲು ಒತ್ತಾಯಿಸಿದರು.ಮುಸ್ಲಿಂ ಸಮುದಾಯದ ವೋಟ್ ಪಡೆದು ಗೆದ್ದು ಬಂದಿರುವ ಲೋಕಸಭಾ ಸದಸ್ಯೆ ಇದುವರೆಗೆ ಅಮಾಯಕ ಸಂತ್ರಸ್ತರ ಮನೆಗಳಿಗೆ ಕನಿಷ್ಠ ಸೌಜನ್ಯಕ್ಕಾದರೂ ಭೇಟಿ ನೀಡದಿರುವುದು ಖಂಡನೀಯ ಎಂದು ಜಿಲ್ಲಾ ಉಪಾಧ್ಯಕ್ಷರಾದ ರಿಯಾಝ್ ಅಹ್ಮದ್ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮಹಮ್ಮದ್ ಮೋಹಸೀನ್, ಫಯಾಜ್ ಅಹಮದ್, ಜಿಲ್ಲಾ ಕಾರ್ಯದರ್ಶಿ ಮೊಹಮ್ಮದ್ ಅಜರುದ್ದೀನ್, ಜಿಲ್ಲಾ ಕೋಶಾಧಿಕಾರಿ ಎ ಆರ್ ತಾಹಿರ್, ಜಿಲ್ಲಾ ಸಮಿತಿ ಸದಸ್ಯರಾದ ಮನ್ಸೂರ್ ಆಲಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ಅಧ್ಯಕ್ಷರಾದ ಏಜಾಜ್ ಅಹಮದ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!