ಆಧ್ಯಾತ್ಮಿಕ ಕೇಂದ್ರಗಳಲ್ಲಿ ಸಿಗಲಿದೆ ಮನುಷ್ಯನಿಗೆ ಶಾಂತಿ ನೆಮ್ಮದಿ

mp veena

ದಾವಣಗೆರೆ : ಮನುಷ್ಯನಿಗೆ ಶಾಂತಿ ನೆಮ್ಮದಿ ಸಿಗಬೇಕೆಂದರೆ ಅದು ಆಧ್ಯಾತ್ಮಿಕ ಕೇಂದ್ರಗಳಲ್ಲಿ ಮಾತ್ರವೆಂದು ಕೆಪಿಸಿಸಿ ರಾಜ್ಯಪ್ರಧಾನ ಕಾರ್ಯದರ್ಶಿ ಎಂ.ಪಿ ಲತಾ ಮಲ್ಲಿಕಾರ್ಜುನ ನುಡಿದರು. ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ರಾಗಿಮಸಲವಾಡ ಗ್ರಾಮದಲ್ಲಿ ಶ್ರೀಮತಿ ಮಹದೇವಮ್ಮ ಇವರ ಜಮೀನಿನಲ್ಲಿ ದೊಡ್ಡ ಈಶ್ವರ ದೇವಸ್ಥಾನದ ಪುನರ್‌ನಿರ್ಮಾಣದ ಭೂಮಿಪೂಜೆ ಕಾರ್ಯವನ್ನು ನೆರವೇರಿಸಿ ಮಾತನಾಡಿದ ಅವರು, ಬೇಗನೆ ದೇವಸ್ಥಾನದ ಕಾರ್ಯ ಪೂರ್ಣಗೊಳ್ಳಲಿ ಎಂದು ಶುಭ ಹಾರೈಸಿದರು.

ದಿವ್ಯ ಸಾನ್ನಿಧ್ಯ ವಹಿಸಿದ್ದ ಹನುಮಪ್ಪ ಮಟ್ಟಿ ಕ್ಷೇತ್ರದ ಶ್ರೀ ಬಸವರಾಜ್ ಗುರೂಜಿ ಅವರು ಆಶೀರ್ವಚನ ನೀಡುತ್ತಾ ಶ್ರೀಮತಿ ಮಹಾದೇವಮ್ಮನವರು ಹಿಡಿದ ಕೆಲಸವನ್ನು ಮುಗಿಸಲಿ ಇದಕ್ಕೆ ಎಲ್ಲರ ಸಹಕಾರ ಅಗತ್ಯವೆಂದರು. ಪ್ರಾಸ್ತಾವಿಕ ನುಡಿಗಳನ್ನಾಡಿದ ದಾವಣಗೆರೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನಿಕಟಪೂರ್ವ ಅಧ್ಯಕ್ಷ ವೀರಪ್ಪ ಎಂ. ಭಾವಿ ಶ್ರೀ ದೊಡ್ಡ ಈಶ್ವರ ದೇವಸ್ಥಾನದ ನಿರ್ಮಾಣಕ್ಕೆ ಸುಮಾರು 40 ಲಕ್ಷ ರೂ. ಯೋಜನೆಯನ್ನು ರೂಪಿಸಿದ್ದು ಸರ್ಕಾರ ಆರ್ಥಿಕ ನೆರವು ನೀಡಬೇಕೆಂದರು. ಮೌನೇಶ್ವರ ಕಿವುಡ ಮತ್ತು ಮೂಗರ ಶಾಲೆಯ ವ್ಯವಸ್ಥಾಪಕ ಗೋಪಾಲಪ್ಪ, ಮಾಜಿ ಮೇಯರ್ ಅಜಯಕುಮಾರ್, ದೂಡಾ ಅಧ್ಯಕ್ಷ ಶಿವಕುಮಾರ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಮಲ್ಲಿಕಾರ್ಜುನ ಟ್ರಸ್ಟ್ ಅಧ್ಯಕ್ಷೆ ಮಹಾದೇವಮ್ಮ ಮಾತನಾಡಿ, ಈಗಾಗಲೇ ನಮ್ಮ ಜಮೀನಿನಲ್ಲಿ ವೃದ್ಧಾಶ್ರಮವನ್ನು ನಿರ್ಮಿಸಿದ್ದೇವೆ, ದೇವಸ್ಥಾನ ನಿರ್ಮಾಣಕ್ಕೆ ಇಂದು ಚಾಲನೆ ನೀಡಿದ್ದು ಇದಕ್ಕೆ ದಾನಿಗಳ ಸಹಕಾರ ಅಗತ್ಯ ಎಂದು ನುಡಿದರು. ಆರಂಭದಲ್ಲಿ ಪ್ರಾರ್ಥನೆ ನಂತರ ಮಲ್ಲಿಕಾರ್ಜುನ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

garudavoice21@gmail.com 9740365719

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!