ನಾಲ್ವರಿಗೆ ಬಿಟ್ಟು ಉಳಿದೆಲ್ಲಾ ಹಾಲಿ ಶಾಸಕರಿಗೆ ಟಿಕೆಟ್ : ಯಡಿಯೂರಪ್ಪ

ನಾಲ್ವರಿಗೆ ಬಿಟ್ಟು ಉಳಿದೆಲ್ಲಾ ಹಾಲಿ ಶಾಸಕರಿಗೆ ಟಿಕೆಟ್ : ಯಡಿಯೂರಪ್ಪ

ಕಲಬುರಗಿ: ನಾಲ್ಕಾರು ಜನ ಹಾಲಿ ಶಾಸಕರಿಗೆ ಟಿಕೆಟ್ ಸಿಗುವುದಿಲ್ಲ. ಉಳಿದಂತೆ ಎಲ್ಲ ಶಾಸಕರಿಗೆ ಟಿಕೆಟ್ ನೀಡಲಾಗುವುದು ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಪತ್ರಕರ್ತರೊಂದಿಗೆ ಮಾತನಾಡಿರುವ ಅವರು, ಪಕ್ಷದ ಮೊದಲ ಪಟ್ಟಿಯನ್ನು ಶೀಘ್ರ ಬಿಡುಗಡೆ ‌ಮಾಡಲಾಗುವುದು ಎಂದು ಹೇಳಿದರು.
ಪ್ರಸ್ತುತ ನಡೆಯುತ್ತಿರುವ ವಿಜಯ ಸಂಕಲ್ಪ ಯಾತ್ರೆಯ ಸಮಾರೋಪ ಮಾರ್ಚ್ 25ರಂದು ದಾವಣಗೆರೆಯಲ್ಲಿ  ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಲಿದ್ದಾರೆ. ಐದಾರು ಲಕ್ಷ ಜನರು ಸೇರಲಿದ್ದಾರೆ ಎಂದರು.
ರಾಜ್ಯದಾದ್ಯಂತ ವಿಜಯ ಸಂಕಲ್ಪ ಯಾತ್ರೆಗೆ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗುತ್ತಿದ್ದು, 140 ಸೀಟುಗಳನ್ನು ಪಡೆದು ಸರ್ಕಾರ ರಚಿಸಲಿದ್ದೇವೆ. ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಚುನಾವಣೆ ‌ನಡೆಯಲಿದೆ. ಸ್ಪಷ್ಟ ಬಹುಮತ ಬಂದ ಬಳಿಕ ಶಾಸಕರು ಮುಖ್ಯಮಂತ್ರಿ ಅಭ್ಯರ್ಥಿಯನ್ನು ಆಯ್ಕೆ ಮಾಡಲಿದ್ದಾರೆ ಎಂದರು.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!