ಟಿಪ್ಪು ಸುಲ್ತಾನ್ ಜಯಂತಿ ಆಚರಣೆ:ಯಾವುದೇ ಪ್ರತಿಭಟನೆ, ಮೆರವಣಿಗೆ ಅಥವಾ ಬೈಕ್ ರ್ಯಾಲಿ ಮಾಡದಂತೆ ಡಿಸಿ ಆದೇಶ

IMG-20211109-WA0099

ದಾವಣಗೆರೆ: ನ.10 ರ ಇಂದು ಟಿಪ್ಪು ಸುಲ್ತಾನ್ ಜಯಂತಿ ಆಚರಣೆ ಹಿನ್ನೆಲೆಯಲ್ಲಿ ಯಾವುದೇ ಪ್ರತಿಭಟನೆ, ಮೆರವಣಿಗೆ ಅಥವಾ ಬೈಕ್ ರ್ಯಾಲಿ ಮಾಡದಂತೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ‌ ಆದೇಶ ಹೊರಡಿಸಿದ್ದಾರೆ.

ಮುಸ್ಲಿಂ ಸಮಾಜದವರು ಟಿಪ್ಪು ಜಯಂತಿ‌ ಆಚರಿಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಈ ಸಂದರ್ಭದಲ್ಲಿ ಮೆರವಣಿಗೆ, ಬೈಕ್ ರ್ಯಾಲಿ ಮಾಡಿದರೆ ಬಿಜೆಪಿ ಅಥವಾ ಹಿಂದೂಪರ ಸಂಘಟನೆಗಳು ವಿರೋಧಿಸಿ ಪ್ರತಿಭಟನೆ ನಡೆಸುವ ಸಾಧ್ಯತೆಗಳಿರುವುದರಿಂದ ಕೋಮುಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಟಿಪ್ಪು ಜಯಂತಿ ಆಚರಣೆಯ ನ.10 ರಂದು ದಿನದ 24 ಗಂಟೆಗಳು ವೇಳೆ ಯಾವುದೇ ಮೆರವಣಿಗೆ, ಬೈಕ್ ರ್ಯಾಲಿ ಅಥವಾ ಪ್ರತಿಭಟನೆ ಮಾಡದಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!