ನಗರಕ್ಕೆ ಡಿಸೆಂಬರ್ 15 ರಂದು ಒಬಿಸಿ ರಾಜ್ಯಾಧ್ಯಕ್ಷ ಮಧು ಬಂಗಾರಪ್ಪ.

ದಾವಣಗೆರೆ: ದಿನಾಂಕ 15-12-2022 ಗುರುವಾರ ಮಧ್ಯಾಹ್ನ 2.30 ಗಂಟೆಗೆ ಓಬಿಸಿ ರಾಜ್ಯಾಧ್ಯಕ್ಷರಾದ ಶ್ರೀ ಮಧು ಬಂಗಾರಪ್ಪನವರು ಪಕ್ಷದ ಕಚೇರಿಯಲ್ಲಿ ಜಿಲ್ಲಾಧ್ಯಕ್ಷರಾದ ಎಚ್.ಬಿ ಮಂಜಪ್ಪನವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ಭಾಗವಹಿಸುವರು.
ಈ ಸಂದರ್ಭದಲ್ಲಿ ಓಬಿಸಿ ಜಿಲ್ಲಾಧ್ಯಕ್ಷರಾದ ಎಚ್.ಗುರುರಾಜ್, ಓಬಿಸಿ ಎಐಸಿಸಿ ವೀಕ್ಷಕರದ ಸತೀಶ್ ಕುಮಾರ್ ಎಚ್.ವಿ,
ರಾಜ್ಯ ಉಪಾಧ್ಯಕ್ಷರಾದ ಹಾಲೇಶ್, ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ಜಮ್ನಳ್ಳಿ ನಾಗರಾಜ್ ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿರುವರು.
ಈ ಸಭೆಗೆ ಜಿಲ್ಲೆಯ ಶಾಸಕರು, ಮಾಜಿ ಶಾಸಕರು, ಕೆಪಿಸಿಸಿ ಪದಾಧಿಕಾರಿಗಳು, ಜಿಲ್ಲಾ ಸಮಿತಿ ಪದಾಧಿಕಾರಿಗಳು, ಪಕ್ಷದ ಚುನಾಯಿತ ಪ್ರತಿನಿಧಿಗಳು, ಪಾಲಿಕೆ ಸದಸ್ಯರು, ಬ್ಲಾಕ್ ಅಧ್ಯಕ್ಷರು, ಪದಾಧಿಕಾರಿಗಳು, ಎಲ್ಲಾ ವಿಭಾಗಗಳ ಅಧ್ಯಕ್ಷರು, ಪದಾಧಿಕಾರಿಗಳು, ವಾರ್ಡ್, ಪಂಚಾಯತ್ ಅಧ್ಯಕ್ಷರು, ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ ಶೆಟ್ಟಿ ಕೋರಿದ್ದಾರೆ.
ಕೆ.ಎಲ್.ಹರೀಶ್ ಬಸಾಪುರ.