ಇಂದು-ನಾಳೆ ಅಂತರ್ ಕಾಲೇಜುಗಳ ವಾಲಿಬಾಲ್ ಪಂದ್ಯಾವಳಿ

Today-Tomorrow Inter College Volleyball Tournament

ದಾವಣಗೆರೆ: ಇಲ್ಲಿನ ಆರ್.ಎಲ್. ಕಾನೂನು ಕಾಲೇಜು ಇವರ ವತಿಯಿಂದ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಅಂತರ್ ಕಾಲೇಜುಗಳ ವಾಲಿಬಾಲ್ ಪಂದ್ಯಾವಳಿಯನ್ನು ಜ.30 ಮತ್ತು 31ರಂದು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.

ಜ.30ರ ಇಂದು ಬೆಳಿಗ್ಗೆ 10 ಗಂಟೆಗೆ ಶಾಸಕ ಶಾಮನೂರು ಶಿವಶಂಕರಪ್ಪ ನಡೆಯುವ ಪಂದ್ಯಾವಳಿಯ ಉದ್ಘಾಟನೆ ನೆರವೇರಿಸಲಿದ್ದು, ದಕ್ಷಿಣ ಇಂಡಿಯನ್ ರೈಲ್ವೇಯ ಮುಖ್ಯ ಪೊಲೀಸ್ ಅಧಿಕಾರಿ, ರಾಷ್ಟ್ರೀಯ ವಾಲಿಬಾಲ್ ಕ್ರೀಡಾಪಟು ಕೆ. ಇಮ್ತಿಯಾಜ್ ಅಹಮದ್, ಕೆಎಸ್‌ಎಲ್‌ಯು ದೈಹಿಕ ಶಿಕ್ಷಣ ವಿಭಾಗದ ಮುಖ್ಯಸ್ಥ ಡಾ. ಖಾಲೀದ್ ಖಾನ್ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳಲಿದ್ದಾರೆ. ಕಾಲೇಜಿನ ಪ್ರಾಂಶುಪಾಲ ಪ್ರೊ. ಡಾ. ಎಂ. ಸೋಮೇಶ್ವರಪ್ಪ ಅಧ್ಯಕ್ಷತೆ ವಹಿಸಿಕೊಳ್ಳಲಿದ್ದಾರೆ.

ಜ.31ರಂದು ಸಂಜೆ 5 ಗಂಟೆಗೆ ನಡೆಯುವ ಕ್ರೀಡಾಕೂಟದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ. ಡಾ. ಎಂ. ಸೋಮೇಶ್ವರಪ್ಪ ವಹಿಸಿಕೊಳ್ಳಲಿದ್ದು, ಬಾಪೂಜಿ ವಿದ್ಯಾಸಂಸ್ಥೆಯ ನಿರ್ದೇಶಕ ಡಾ. ಎಂ.ಜಿ. ಈಶ್ವರಪ್ಪ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದು, ಪಾಲಿಕೆ ಮಾಜಿ ಸದಸ್ಯ ದಿನೇಶ್ ಕೆ.ಶೆಟ್ಟಿ ಮತ್ತು ಕೆಎಸ್‌ಎಲ್‌ಯು ದೈಹಿಕ ಶಿಕ್ಷಣ ವಿಭಾಗದ ಮುಖ್ಯಸ್ಥ ಡಾ. ಖಾಲೀದ್ ಖಾನ್ ಇವರು ವಿಶೇಷ ಆಹ್ವಾನಿತರಾಗಿ ಆಗಮಿಸಲಿದ್ದಾರೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!