45 DYSP Transfer; ದಾವಣಗೆರೆ ಡಿಸಿಆರ್‌ಬಿ DYSP ಬಿ.ಎಸ್.ಬಸವರಾಜ್ ಗ್ರಾಮಾಂತರ ಡಿ ವೈ ಎಸ್ ಪಿ

ದಾವಣಗೆರೆ : ನಗರದ ಎಸ್ಪಿ ಕಚೇರಿಯಲ್ಲಿ ಡಿಸಿಆರ್‌ಬಿ ಕ್ರೈಂ ಬ್ರಾಂಚ್‌ನಲ್ಲಿದ್ದ ಬಿ.ಎಸ್.ಬಸವರಾಜ್ ದಾವಣಗೆರೆ ಗ್ರಾಮಾಂತರ ಡಿಎಸ್ಪಿಯಾಗಿ ನೇಮಕಗೊಂಡಿದ್ದಾರೆ. ಈ ಹಿಂದೆ ಸೈದಾಪುರದಲ್ಲಿ ಪಿಎಸ್‌ಐಆಗಿ 4 ವರ್ಷ, ಹರಪನಹಳ್ಳಿಯಲ್ಲಿ ಸಿಪಿಐ ಆಗಿ 4 ವರ್ಷ, ತೀರ್ಥಹಳ್ಳಿ ಸಿಪಿಐ ಆಗಿ 2 ವರ್ಷ, ಬೆಂಗಳೂರು ಕರ್ನಾಟಕ ಲೋಕಾಯುಕ್ತದಲ್ಲಿ 6 ವರ್ಷ, ಚಿತ್ರದುರ್ಗ ಡಿಸಿಆರ್‌ಬಿಯಲ್ಲಿ 6 ತಿಂಗಳು, ದಾವಣಗೆರೆ ಡಿಸಿಆರ್‌ಬಿಯಲ್ಲಿ 3 ವರ್ಷ ಕೆಲಸ ಮಾಡಿದ್ದಾರೆ.


ಅಕ್ರಮ ಮರಳುಗಣಿಗಾರಿಕೆಯಲ್ಲಿ ತೊಡಗಿದ್ದ ಸಿದ್ದಿಖಿ ಬಂಧನ, ಕಕ್ಕರಗೊಳ್ಳ ಮರ್ಡರ್ ಕೇಸ್, ಮೆಕ್ಕೆಜೋಳ ವಂಚಕರ ಬಂಧನ, ಓಜಿಕುಪ್ಪಂ ಗ್ಯಾಂಗ್ ಬಂಧನ, ನಕಲಿ ಚಿನ್ನ ಮಾರಾಟಗಾರರ ಬಂಧನ , ಫೇಕ್ ಕರೆನ್ಸಿ ಹೀಗೆ ಹತ್ತಾರು ಹಲವು ಪ್ರಕರಣಗಳನ್ನು ಭೇದಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ದಾವಣಗೆರೆ ಹಾಗೂ ಶಿವಮೊಗ್ಗದಲ್ಲಿ ನಡೆಯುವ ಹಿಂದೂ ಮಹಾಸಭಾ ಗಣಪತಿ, ಕಮ್ಯೂನಿಯಲ್ ಗಲಾಟೆ ಸೇರಿದಂತೆ ಬಿಗಿ ಬಂದೋ ಬಸ್ತ್‌ಗಳಲ್ಲಿ ಇವರ ಪಾತ್ರ ಪ್ರಮುಖದ್ದಾಗಿದೆ.

ದಾವಣಗೆರೆ ಗ್ರಾಮಾಂತರ ಎಎಸ್ಪಿಯಾಗಿದ್ದ ಕನ್ನಿಕಾ ಸಕ್ರೀವಾಲ್ ಐಪಿಎಸ್ ಆಗಿದ್ದು, ಇನ್ನೂ ಸ್ಥಳ ತೋರಿಸಿಲ್ಲ. ದಾವಣಗೆರೆ ಗ್ರಾಮಾಂತರ ಪೊಲೀಸ್ ಉಪಾಧೀಕ್ಷಕರ ಕಚೇರಿಯಲ್ಲಿ ಮಂಜುನಾಥ್ ಗಂಗಲ್, ನರಸಿಂಹ ತಾಮ್ರಧ್ವಜ, ಕನ್ನಿಕ್ ಸಕ್ರಿವಾಲ್ ಕೆಲಸ ಮಾಡಿದ್ದು , ಇದೀಗ ಡಿಸಿಆರ್‌ಬಿ ಡಿಎಸ್ಪಿ ಬಸವರಾಜ್ ನೇಮಕವಾಗಿದ್ದಾರೆ. ಆಗಸ್ಟ್ ಒಂದು ಮಂಗಳವಾರ 11 ಗಂಟೆಗೆ ಅಧಿಕಾರ ಸ್ವೀಕರಿಸುವರು ಎಂದು ತಿಳಿದುಬಂದಿದೆ

Leave a Reply

Your email address will not be published. Required fields are marked *

error: Content is protected !!