ವಕೀಲರ ಸಂಘದ ನೂತನ ಅಧ್ಯಕ್ಷರಿಗೆ ಸನ್ಮಾನ

ವಕೀಲರ ಸಂಘದ ನೂತನ ಅಧ್ಯಕ್ಷರಿಗೆ ಸನ್ಮಾನ

ದಾವಣಗೆರೆ: ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಜನಪರ ವಕೀಲ ಎಂದೇ ಹೆಸರಾಗಿರುವ ಎಲ್‌.ಎಚ್‌. ಅರುಣಕುಮಾರ್‌ ಅವರನ್ನು ನೆರಳು ಬೀಡಿ ಕಾರ್ಮಿಕರ ಯೂನಿಯನ್‌ ವತಿಯಿಂದ ಬುಧವಾರ ಯೂನಿಯನ್‌ ಕಚೇರಿ ಸಭಾಂಗಣದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

ಸನ್ಮಾನ ಸ್ವೀಕರಿಸಿ ಅರುಣ್‌ ಕುಮಾರ್‌ ಮಾತನಾಡಿ, ‘ಜನಪರವಾಗಿ ಕೆಲಸ ಮಾಡುತ್ತಾ ಬಂದಿರುವ ನೆರಳು ಬೀಡಿ ಕಾರ್ಮಿಕರ ಯೂನಿಯನ್‌ನ ಹೋರಾಟಕ್ಕೆ ಮುಂದೆಯೂ ಸಂಪೂರ್ಣ ಬೆಂಬಲ ನೀಡಲಾಗುವುದು. ವಕೀಲನಾಗಿ ಬಡಜನರ ಧ್ವನಿಯಾಗಿ ಕೆಲಸವನ್ನು ಇಲ್ಲಿವರೆಗೆ ಮಾಡಿಕೊಂಡು ಬಂದಿದ್ದು, ಮುಂದೆಯೂ ಆ ಕೆಲಸವನ್ನು ಮುಂದುವರಿಸುತ್ತೇನೆ’ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ದಾವಣಗೆರೆಯಿಂದ ವರ್ಗಾವಣೆಗೊಂಡು ಬೆಂಗಳೂರಿಗೆ ತೆರಳುತ್ತಿರುವ ಪತ್ರಕರ್ತ ಬಾಲಕೃಷ್ಣ ಪಿ.ಎಚ್‌. ಅವರನ್ನು ಬೀಳ್ಕೊಡಲಾಯಿತು.

ಯೂನಿಯನ್‌ ಅಧ್ಯಕ್ಷೆ ಜಬೀನಾಖಾನಂ ಅಧ್ಯಕ್ಷತೆ ವಹಿಸಿದ್ದರು. ಸಂಘ ಬಶೀರಾಬಿ ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ಕರಿಬಸಪ್ಪ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

error: Content is protected !!