ಅಡಿಕೆ ತುಂಬಿದ ಟ್ರಾಕ್ಟರ್ ಗಳಿಂದ ಹಣ ವಸೂಲಿ ಆರೋಪ.! ಆಜಾದ್ ನಗರ ಠಾಣೆಯ ಇಬ್ಬರು ಪೇದೆಗಳ ಅಮಾನತು

two constables from Davanagere azad nagar police station suspended

ದಾವಣಗೆರೆ: ಆಜಾದ್ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯ ಬೇತುರು ರಸ್ತೆಯಲ್ಲಿ ಚೆಕ್ ಪೋಸ್ಟ್ ಕರ್ತವ್ಯದಲ್ಲಿದ್ದ ಆಜಾದ್ ನಗರ ಪೊಲೀಸ್ ಠಾಣೆಯ ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ ಎಂದು ಬಲ್ಲ ಮೂಲಗಳ ಮಾಹಿತಿಯಿಂದ ತಿಳಿದು ಬಂದಿದೆ.

ಬೇತೂರು ಕಡೆಯಿಂದ ದಾವಣಗೆರೆ ಮಾರ್ಗವಾಗಿ ಬರುವ ಅಡಿಕೆ ತುಂಬಿದ ಟ್ರ್ಯಾಕ್ಟರ್ ಗಳಿಂದ ಹಣ ವಸೂಲಿ ಮಾಡುತ್ತಿದ್ದರೆಂದು ದೂರು ಬಂದ ಮೇರೆಗೆ ಕರ್ತವ್ಯವನ್ನು ಸಮರ್ಪಕವಾಗಿ ನಿರ್ವಹಿಸದೇ ಅಮಾಯಕ ರೈತರ ವಿರುದ್ಧ ದೌರ್ಜನ್ಯ ಮಾಡಿ ಕರ್ತವ್ಯದಲ್ಲಿ ಅತೀವ ಬೇಜವಾಬ್ದಾರಿತನ ಹಾಗೂ ನಿರ್ಲಕ್ಷತನ ವಹಿಸಿದ್ದಾರೆ ಹಾಗೂ ಮೇಲಾಧಿಕಾರಿಗಳ ಆದೇಶವನ್ನು ಉಲ್ಲಂಘಿಸಿದ್ದಾರೆ.

ಆಜಾದ್ ನಗರ ಠಾಣೆಯ ಸಿಬ್ಬಂದಿಗಳಾದ ಅಂಕಳಪ್ಪ ಮತ್ತು ಮುಬಾರಕ್ ರವರ ಮೇಲೆ ಇಲಾಖಾ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಆಜಾದ್ ನಗರ ಪೊಲೀಸ್ ನಿರೀಕ್ಷಕರವರು ನೀಡಿದ ವರದಿ ಮೇರೆಗೆ ಈ ಬಗ್ಗೆ ನಗರ ಉಪ ವಿಭಾಗ ಡಿವೈಎಸ್ಪಿ ರವರು ಸದರಿಯವರ ವಿರುದ್ಧ ಶಿಸ್ತು ಕ್ರಮ ಜರುಗಿಸಲು ಶಿಫಾರಸ್ಸು ಮಾಡಿದ್ದರು.

ಪೊಲೀಸ್ ಅಧೀಕ್ಷಕರಾದ ಶ್ರೀಮತಿ ಉಮಾ ಪ್ರಶಾಂತ್ ಇಬ್ಬರು ಸಿಬ್ಬಂದಿಗಳ ವಿರುದ್ಧ ಮುಂದಿನ ಇಲಾಖಾ ಶಿಸ್ತು ಕ್ರಮವನ್ನು ಬಾಕಿ ಇರಿಸಿಕೊಂಡು ತಕ್ಷಣದಿಂದಲೇ ಜಾರಿಗೆ ಬರುವಂತೆ ಸೇವೆಯಿಂದ ಅಮಾನತ್ತಿನಲ್ಲಿ ಇರಿಸಲು ಆದೇಶಿಸಿರುತ್ತಾರೆಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!