ಮಾನಸಿಕ ವಿಕಲಚೇತನನ ಮೇಲೆ ಮೂತ್ರ ವಿಸರ್ಜನೆ.! ಮಧ್ಯಪ್ರದೇಶದ ಬಿಜೆಪಿ ಕಾರ್ಯಕರ್ತನ ಮೇಲೆ ಪ್ರಕರಣ ದಾಖಲು

ಮಾನಸಿಕ ವಿಕಲಚೇತನನ ಮೇಲೆ ಮೂತ್ರ ವಿಸರ್ಜನೆ.! ಮಧ್ಯಪ್ರದೇಶದ ಬಿಜೆಪಿ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲು

ನವದೆಹಲಿ : ಬಿಜೆಪಿ ಕಾರ್ಯಕರ್ತನೊಬ್ಬ ಮದ್ಯದ ಅಮಲಿನಲ್ಲಿ ಬುಡಕಟ್ಟು ಜನಾಂಗದ ಮಾನಸಿಕ ವಿಕಲಚೇತನನ ಮೇಲೆ ಮೂತ್ರ ವಿಸರ್ಜನೆ ಮಾಡಿದ ಘಟನೆ ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ನಡೆದಿದೆ.

ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಕುಬ್ರಿ ಬಜಾರ್‌ನ ಈ ವೀಡಿಯೊ 9 ದಿನಗಳ ಹಳೆಯದು ಎಂದು ಹೇಳಲಾಗಿದೆ.
ಆರೋಪಿ ಪ್ರವೇಶ್ ಶುಕ್ಲಾ ಕುಬ್ರಿ ಗ್ರಾಮದ ನಿವಾಸಿ. ಆತ ಸಿಧಿ ಜಿಲ್ಲೆಯ ಬಿಜೆಪಿ ಶಾಸಕ ಪಂಡಿತ್‌ ಕೇದಾರನಾಥ್‌ ಶುಕ್ಲಾ ಅವರ ಬೆಂಬಲಿಗ ಹಾಗೂ ಪ್ರತಿನಿಧಿ ಎಂದು ಹೇಳಲಾಗಿದೆ.ಸಿಧಿ ಎಸ್ಪಿ ರವೀಂದ್ರ ವರ್ಮಾ ಅವರು ಟ್ವೀಟ್ ಮಾಡಿದ್ದು, ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿರುವ ವೀಡಿಯೊವನ್ನು ಪರಿಶೀಲಿಸಿದ ನಂತರ, ಆರೋಪಿ ಪ್ರವೇಶ್ ಶುಕ್ಲಾ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.

ಈ ರೀತಿಯ ದುರ್ವತನೆ ತೋರಿದ ವ್ಯಕ್ತಿಯ ವಿರುದ್ಧ ಶೀಘ್ರವಾಗಿ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದು, ಆತನ ಮೇಲೆ ಎನ್‌ಎಸ್‌ಎ (ರಾಷ್ಟ್ರೀಯ ಭದ್ರತಾ ಕಾಯ್ದೆ) ಅಜಿ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!