ಇಂದಿನಿಂದ ‘ ವಂದೇ ಭಾರತ್ ’ ಎಕ್ಸ್ ಪ್ರೆಸ್ ರೈಲು ಸಂಚಾರ ಆರಂಭ

ದಾವಣಗೆರೆ : ಬೆಂಗಳೂರಿನಿಂದ ದಾವಣಗೆರೆ ಮಾರ್ಗವಾಗಿ ಧಾರವಾಡಕ್ಕೆ ಸಂಚರಿಸುವ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸಂಚಾರಕ್ಕೆ ಜೂನ್ 27 ರಂದು ಪ್ರಧಾನಿ ನರೇಂದ್ರ ಮೋದಿಯವರು ದೆಹಲಿಯಿಂದ ವರ್ಚುವಲ್ ಮೂಲಕ ಹಸಿರು ನಿಶಾನೆ ತೋರಿಸಲಿದಲಿದ್ದಾರೆ.
ಅತ್ಯಾಧುನಿಕ ಸೌಕರ್ಯಗಳನ್ನು ಹೊಂದಿರುವ ಅತಿ ವೇಗವಾಗಿ ಸಂಚರಿಸಬಲ್ಲ ಈ ರೈಲು ಪ್ರತಿದಿನ ಬೆಂಗಳೂರು-ಧಾರವಾಡ ಮಧ್ಯೆ ಸಂಚಾರ ಮಾಡಲಿದ್ದು, ಯಶವಂತಪುರ , ದಾವಣಗೆರೆ ಮತ್ತು ಹುಬ್ಬಳ್ಳಿ ಯಲ್ಲಿ ನಿಲುಗಡೆಯಾಗಲಿದೆ.
ಧಾರವಾಡದಿಂದ ಹೊರಟು ಬೆಳಗ್ಗೆ 11ಕ್ಕೆ ದಾವಣಗೆರೆಗೆ ಆಗಮಿಸಲಿದ್ದು ಈ ಸಂದರ್ಭದಲ್ಲಿ ದಾವಣಗೆರೆ ರೈಲು ನಿಲ್ದಾಣದಲ್ಲಿ ಸ್ವಾಗತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಚುನಾಯಿತ ಪ್ರತಿನಿಧಿಗಳು, ಹಿರಿಯ ಅಧಿಕಾರಿಗಳು ಸಂಘ-ಸಂಸ್ಥೆಗಳ ಪ್ರತಿನಿಧಿಗಳ ಜೊತೆಗೆ ನಾಗರಿಕರು ಪಾಲ್ಗೊಳ್ಳುವಂತೆ ನೈರುತ್ಯ ರೈಲ್ವೆ ಮುಖ್ಯ ವಾಣಿಜ್ಯ ನಿರೀಕ್ಷಕ ಬಿ.ವಿ.ರಾಕೇಶ್ ತಿಳಿಸಿದ್ದಾರೆ