ಸಾಲುಮರದ ವೀರಾಚಾರಿ ನೇಣಿಗೆ ಶರಣು.! ರಾಜ್ಯಪ್ರಶಸ್ತಿ ಪುರಸ್ಕೃತರಿಗೆ ಸಿಗಲಿಲ್ಲ ‘ನ್ಯಾಯಬೆಲೆ ಅಂಗಡಿ ನ್ಯಾಯ’

salumarada veerachari suicide photo

ದಾವಣಗೆರೆ: ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಮಿಟ್ಲಕಟ್ಟೆ ಗ್ರಾಮದ ಸಾಲುಮರದ ವೀರಾಚಾರಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಸಾಲುಮರದ ವೀರಾಚಾರಿ ಎಂದೇ ಪ್ರಖ್ಯಾತವಾಗಿರುವ ಇವರು 3000 ಕ್ಕೂ ಹೆಚ್ಚು ಮರಗಳನ್ನು ಬೆಳೆಸಿ ರಾಜ್ಯೋತ್ಸವ ಪ್ರಶಸ್ತಿ ಜೊತೆಗೆ ಇನ್ನೂ ನೂರಾರು ಪ್ರಶಸ್ತಿಗಳನ್ನು ಪಡೆದು ನಾಡಿಗೆ ಅನನ್ಯ ಸೇವೆಯನ್ನು ಸಲ್ಲಿಸಿದ್ದರು. ಇವರು ಮಿಟ್ಲಗಟ್ಟೆ ಗ್ರಾಮದ ನ್ಯಾಯಬೆಲೆ ಅಂಗಡಿ ವಿರುದ್ದ ಅಕ್ರಮ ಪಡಿತರ ಬಗ್ಗೆ ಹೋರಾಟವನ್ನು ಮಾಡುತ್ತಿದ್ದರು. ನೂರಾರು ಜನರಿಗೆ ವಿವಿಧ ರೀತಿಯಲ್ಲಿ ಅನ್ನವನ್ನು ಕೊಟ್ಟಿದ್ದರು.

ಇತ್ತೀಚೆಗೆ ಒಂದು ವಾಗ್ದಾನ ಮಾಡಿದ್ದರು. ನ್ಯಾಯಾಲಯದಲ್ಲಿ ನ್ಯಾಯ ಸಿಗದಿದ್ದರೆ ಜನರಲ್ಲಿ ನ್ಯಾಯ ಸಿಗದಿದ್ದರೆ ದೇವರಲ್ಲಿ ನ್ಯಾಯ ಸಿಗದಿದ್ದರೆ “ನೇಣಿಗೆ ಶರಣು” ಎಂಬ ವಾಗ್ದಾನ ಮಾಡಿದ್ದರು. ವಾಗ್ದಾನದಂತೆ ಸೆಪ್ಟೆಂಬರ್ 20 ರ ರಾತ್ರಿ ಸುಮಾರು 2 ಗಂಟೆಗೆ ನೆಣಿಗೆ ಶರಣಾಗಿದ್ದಾರೆ. ಅವರ ಆತ್ಮಕ್ಕೆ ದೇವರು ಶಾಂತಿ ಸಿಗಲಿ ಎಂದು ದೇವರಲ್ಲಿ ಗ್ರಾಮಸ್ಥರು ಇವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದಿದ್ದಾರೆ.

ಸಾಲುಮರದ ವೀರಾಚಾರಿ ಜಿಲ್ಲಾಧಿಕಾರಿ ಬಳಿ ದೂರು ನೀಡಿದ್ದ ಕೊನೆಯ ಚಿತ್ರ ಗರುಡವಾಯ್ಸ್ ಬಳಿ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!