ವಿಧಾನಪರಿಷತ್ ಚುನಾವಣೆಗೆ ಕೆಪಿಸಿಸಿ ಕಚೇರಿಯಲ್ಲಿ ಚಿತ್ರದುರ್ಗ-ದಾವಣಗೆರೆ ಹಾಲಿ ಮಾಜಿ ಶಾಸಕರ ಸಭೆ

ಬೆಂಗಳೂರು: ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಚಿತ್ರದುರ್ಗ- ದಾವಣಗೆರೆ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಕಛೇರಿಯಲ್ಲಿ ದಾವಣಗೆರೆ- ಚಿತ್ರದುರ್ಗ ಜಿಲ್ಲೆಗಳ ಹಾಲಿ ಮತ್ತು ಮಾಜಿ ಶಾಸಕರುಗಳು, ಪಕ್ಷದ ಪದಾಧಿಕಾರಿಗಳ ಸಭೆ ನಡೆಯಿತು. ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್, ಮಾಜಿ ಸಚಿವರು, ಹಾಲಿ ಶಾಸಕರಾದ ಡಾ. ಶಾಮನೂರು ಶಿವಶಂಕರಪ್ಪನವರು, ಮಾಜಿ ಸಚಿವ ಹೆಚ್.ಆಂಜನೇಯ, ಶಾಸಕ ಎಸ್. ರಾಮಪ್ಪ,ಮಾಜಿ ಸಂಸದ ಚಂದ್ರಪ್ಪ,
ಮಾಜಿ ಶಾಸಕರಾದ ಹೆಚ್.ಪಿ.ರಾಜೇಶ್, ಉಮಾಪತಿ, ಗೋವಿಂದಪ್ಪ, ಮುಖಂಡರಾದ ಕೆ.ಎಸ್.ಬಸವಂತ್, ದಿನೇಶ್ ಕೆ.ಶೆಟ್ಟಿಯವರು ಉಪಸ್ಥಿತರಿದ್ದರು.