ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ತಿಗೆ ಚುನಾವಣೆ: ಶಸ್ತ್ರಾಸ್ತ್ರಗಳನ್ನು ಪೊಲೀಸ್ ಠಾಣೆಗೆ ಒಪ್ಪಿಸಲು ಡಿಸಿ ಆದೇಶ

IMG-20211117-WA0115

ಚಿತ್ರದುರ್ಗ: ಕರ್ನಾಟಕ ವಿಧಾನ ಪರಿಷತ್ತಿಗೆ ಚಿತ್ರದುರ್ಗ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಸಾರ್ವತ್ರಿಕ ಚುನಾವಣೆ-2021ಕ್ಕೆ ಸಂಬಂಧಿಸಿದಂತೆ, ಚುನಾವಣೆ ಸಂದರ್ಭದಲ್ಲಿ ಅಹಿತಕರ ಘಟನೆಗಳಿಗೆ ಅವಕಾಶವಾಗದಂತೆ ಬಂದೂಕು ಪರವಾನಗಿ ಪಡೆದಿರುವ ನಾಗರೀಕರು ತಮ್ಮ ಬಳಿ ಇರುವ ಎಸ್‍ಬಿಎಂಎಲ್, ಎಸ್‍ಬಿಬಿಎಲ್, ಡಿಬಿಬಿಎಲ್, ಡಿಬಿಎಂಎಲ್, ರಿವಾಲ್ವಾರ್ ಹಾಗೂ ಪಿಸ್ತೂಲ್ ಇತ್ಯಾದಿ ಶಸ್ತ್ರಾಸ್ತ್ರಗಳನ್ನು ನವೆಂಬರ್ 9 ರಿಂದ ಚುನಾವಣಾ ಪ್ರಕ್ರಿಯೆಗಳು ಮುಕ್ತಾಯಗೊಳ್ಳುವವರೆಗೆ (ಡಿಸೆಂಬರ್ 16) ಹತ್ತಿರದ ಪೊಲೀಸ್ ಠಾಣೆಯಲ್ಲಿರುವ ಅಧಿಕಾರಿಗಳ ವಶಕ್ಕೆ ಒಪ್ಪಿಸಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಆದೇಶಿಸಿದ್ದಾರೆ.

ಈ ಆದೇಶವು ಚಿತ್ರದುರ್ಗ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಬ್ಯಾಂಕ್, ಕೇಂದ್ರ ಹಾಗೂ ರಾಜ್ಯ ಸರ್ಕಾರಿ ಒಡೆತನದ ಸಂಸ್ಥೆಗಳ ಶಸ್ತ್ರಾಸ್ತ್ರಗಳಿಗೆ ಅನ್ವಯಿಸುವುದಿಲ್ಲ. ವಿನಾಯಿತಿಗೆ ಸ್ವೀಕೃತವಾಗುವ ಪ್ರಸ್ತಾವನೆಗಳನ್ನು ಪೊಲೀಸ್ ಅಧೀಕ್ಷಕರು ಪರಿಶೀಲಿಸಿ, ನಿಯಮಾನುಸಾರ ವಿನಾಯಿತಿ ನೀಡಲು ಕ್ರಮವಹಿಸಬೇಕು ಹಾಗೂ ಶಸ್ತ್ರಾಸ್ತ್ರಗಳನ್ನು ತಂದಿರಿಸಿದ ಪರವಾನಗಿದಾರರಿಗೆ ಸೂಕ್ತ ರಶೀದಿಯನ್ನು ನೀಡಲು ಆದೇಶಿಸಿದೆ.
ಈ ಆದೇಶವು ನೀತಿ ಸಂಹಿತೆ ಮುಕ್ತಾಯವಾಗುವವರೆಗೆ ಮಾತ್ರ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕವಿತಾ ಎಸ್.ಮನ್ನಿಕೇರಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!