ಹಾವೇರಿಯ ಡಿ ವೈ ಎಫ್ ಐ ಹಾಗೂ ಎಸ್ ಎಫ್ ಐ ಕಚೇರಿಯಲ್ಲಿ ವಿವೇಕಾನಂದ ಜಯಂತಿ ಆಚರಣೆ

ಹಾವೇರಿ : ವಿದ್ಯಾರ್ಥಿ- ಯುವಜನರ ಸ್ಪೂರ್ತಿ ಸ್ವಾಮಿ_ವಿವೇಕಾನಂದರ 159ನೇ ಜನ್ಮ ದಿನಾಚರಣೆಯನ್ನು ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ಮತ್ತು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್ಐ) ಹಾವೇರಿ ಜಿಲ್ಲಾ ಸಮಿತಿಗಳ ವತಿಯಿಂದ ಎಸ್ಎಫ್ಐ – ಡಿವೈಎಫ್ಐ ಕಛೇರಿಯಲ್ಲಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಆಚರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಡಿವೈಎಫ್ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ, ಡಿವೈಎಫ್ಐ ಮುಖಂಡರಾದ ರೇಣುಕಾ ಕಹಾರ, ಪತ್ರಕರ್ತರು ಹಾಗೂ ಗ್ರಾಮ ಪಂಚಾಯತಿ ಸದಸ್ಯರಾದ ನಿಂಗಪ್ಪ ಆರೇರ್, ಎಸ್ಎಫ್ಐ ಜಿಲ್ಲಾ ಸಹಕಾರ್ಯದರ್ಶಿ ಬಸವರಾಜ ಭೋವಿ, ಎಸ್ಎಫ್ಐ ಮುಖಂಡರಾದ ಬಿರೇಶ ನೆಟಗಲ್ಲಣ್ಣನವರ, ಅರುಣ ಕಡಕೋಳ, ಗುಡ್ಡದಯ್ಯ ದೇವಗಿರಿ ಸೇರಿದಂತೆ ಅನೇಕರಿದ್ದರು.

Leave a Reply

Your email address will not be published. Required fields are marked *

error: Content is protected !!