Exclusive: ದಾವಣಗೆರೆ ನೂತನ ಎಸ್ ಪಿ ಯಾರೂ ಅಂತೀರಾ ಈ ಸುದ್ದಿ ಓದಿ.

ದಾವಣಗೆರೆ: ದಾವಣಗೆರೆ ಜಿಲ್ಲೆಗೆ ನೂತನ ಎಸ್ ಪಿ ಆಗಿ ಸಿ ಬಿ ರಿಷ್ಯಂತ್ ವರ್ಗಾವಣೆಯಾಗಿದ್ದಾರೆ. ಇವರು ಈ ಹಿಂದೆ ಮೈಸೂರು ಜಿಲ್ಲಾ ವರಿಷ್ಠಾಧಿಕಾರಿಗಳಾಗಿದ್ದರು. ಸಿ ಬಿ ರಿಷ್ಯಂತ್ 2013 ಬ್ಯಾಚ್ ಕರ್ನಾಟಕ ಕೆಡರ್ ಐ ಪಿ ಎಸ್ ಅಧಿಕಾರಿಯಾಗಿದ್ದಾರೆ. ಮೂಲತಃ ಬೆಂಗಳೂರಿನ ನಿವಾಸಿಯಾಗಿರುವ ಇವರು, ಮಂಗಳೂರಿನಲ್ಲಿ ಎ ಎಸ್ ಪಿ, ಬಾಗಲಕೋಟೆ ನಲ್ಲಿ ಎಸ್ ಪಿ ಯಾಗಿ, ಕರ್ತವ್ಯ ನಿರ್ವಹಿಸಿದ್ದಾರೆ. ಮೈಸೂರಿನಲ್ಲಿ ಖಡಕ್ ಪೋಲಿಸ್ ಅಧಿಕಾರಿ ಎಂದು ಸಾರ್ವಜನಿಕರು ಪ್ರಶಂಸಿದ್ದಾರೆ.

ದಾವಣಗೆರೆ ಎಸ್ ಪಿ ಹನುಮಂತರಾಯ ಹಾವೇರಿ ಜಿಲ್ಲೆಗೆ ವರ್ಗಾವಣೆಯಾಗಿದ್ದಾರೆ. ಕೊವಿಡ್ ಸಂಕಷ್ಟದಲ್ಲಿ ಉತ್ತಮ ಕಾರ್ಯ ನಿರ್ವಹಿಸಿದ್ದಲ್ಲದೆ, ಇಲಾಖೆಯ ಸಿಬ್ಬಂದಿ ಹಾಗೂ ಸಾರ್ವಜನಿಕವಾಗಿ ತುಂಬಾ ಅನ್ಯೋನ್ಯತೆ ಇಂದ ಸಹಕರಿಸಿದ್ದಾರೆ.

ಇಬ್ಬರೂ ಪೊಲೀಸ್ ವರಿಷ್ಟಾಧಿಕಾರಿಗಳಿಗೆ ಗರುಡವಾಯ್ಸ್ ಪರವಾಗಿ ಧನ್ಯವಾದಗಳು.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!