ಬಸಾಪುರದ ಸರ್ಕಾರಿ ಉನ್ನತೀಕರಿಸಿದ ಶಾಲೆಯಲ್ಲಿ ಕಾರ್ಯಾಗಾರ

Basapura gov.

ದಾವಣಗೆರೆ: ಮಹಾನಗರಪಾಲಿಕೆಯ 21ನೇ ವಾರ್ಡಿನ ಬಸಾಪುರದ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಹಾಗೂ ಪೋಷಕರ 3ನೇ ಒಂದು ದಿನದ ತರಬೇತಿ ಕಾರ್ಯಗಾರವನ್ನು ಮಹಾನಗರ ಪಾಲಿಕೆ ಮಾಜಿ ಸದಸ್ಯರಾದ ಬಾಮ ಬಸವರಾಜಯ್ಯ ದೀಪ ಬೆಳಗಿಸುವ ಮೂಲಕ ಉದ್ಘಾಟನೆ ಮಾಡಿದರು.

ನಂತರ ಮಾತನಾಡಿದ ಅವರು, ತಾವು ವಿದ್ಯಾಭ್ಯಾಸ ಮಾಡುತ್ತಿದ್ದಾಗ ಕೇವಲ ಎರಡು ಕೊಠಡಿಗಳ ಮಾತ್ರ ಇದ್ದವು, ಇಂದು ನಾವು ಸುಸಜ್ಜಿತ ಶಾಲೆಗಾಗಿ ಎಲ್ಲಾ ರೀತಿಯ ವ್ಯವಸ್ಥೆ ಮಾಡಲು ತಯಾರಿದ್ದು ತಾವುಗಳು ತಮ್ಮ ಮಕ್ಕಳನ್ನು ಶಾಲೆಗೆ ಕಳಿಸಿ ಅವರನ್ನು ವಿದ್ಯಾವಂತರನ್ನಾಗಿ ಮಾಡಬೇಕು ಎಂದು ಪೋಷಕರಿಗೆ ಕರೆ ನೀಡಿದರು.

ಕೆ.ಎಲ್.ಹರೀಶ್ ಬಸಾಪುರ ಮಾತನಾಡಿ ಶಾಲೆಯಲ್ಲಿ 288 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದು, ನುರಿತ ಶಿಕ್ಷಕರು ಈ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ ಹಾಗೂ ಹೊಸ ಶಾಲಾ ಕಟ್ಟಡಗಳ ನಿರ್ಮಾಣವಾಗುತ್ತಿದ್ದು, ಎಲ್ಲಾ ಪೋಷಕರು ತಮ್ಮ ಮಕ್ಕಳನ್ನು ತಪ್ಪದೇ ಶಾಲೆಗೆ ಕಳಿಸಬೇಕು ಮತ್ತು ಅಕ್ಕಪಕ್ಕದ ಮನೆಯ ಮಕ್ಕಳು ಶಾಲೆಗೆ ಹೋಗದಿದ್ದರೆ ಅಂತಹ ಪೋಷಕರಿಗೆ ಮನವೊಲಿಸಿ ಅವರ ಮಕ್ಕಳನ್ನು ಶಾಲೆಗೆ ಕಳುಹಿಸುವ ವ್ಯವಸ್ಥೆ ಮಾಡಬೇಕು ಎಂದ ಅವರು ಬಡವರಾಗಿ ಹುಟ್ಟುವುದು ತಪ್ಪಲ್ಲ, ಬಡವರಾಗಿ ಸಾಯುವುದು ತಪ್ಪು ಬಡತನ ನಿವಾರಣೆ ಕೇವಲ ವಿದ್ಯೆಯಿಂದ ಮಾತ್ರ ಸಾಧ್ಯ ಎಂದು ತಿಳಿಸಿದರು.

ಸ್ಮಾರ್ಟ್ ಸಿಟಿ ಸಹಾಯಕ ಇಂಜಿನಿಯರ್ ವೀರೇಶ್ ಸಭೆಯನ್ನುದ್ದೇಶಿಸಿ ಮಾತನಾಡಿದರು, ಶಿಕ್ಷಕಿ ಸ್ಮಿತಾ ಪ್ರಾರ್ಥನೆ ಮಾಡಿದರೆ, ಹಿರಿಯ ಶಿಕ್ಷಕಿ ಶಶಿಕಲಾ ಕಾರ್ಯಕ್ರಮ ನಿರೂಪಣೆ ಮಾಡಿದರೇ, ಪ್ರಭಾರ ಮುಖ್ಯ ಶಿಕ್ಷಕ ಸಂತೋಷ್ ಕುಮಾರ್ ಸ್ವಾಗತಿ ಹಾಗೂ ವಂದನಾರ್ಪಣೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಸಿಆರ್‍ಪಿ ಶೌಕತ್ ಆಲಿ ಗ್ರಾಮದ ಮುಖಂಡರಾದ ಸಿ.ಮಹೇಶ್ವರಪ್ಪ, ಎಂ.ಎಸ್.ಕೊಟ್ರಯ್ಯ, ಉಪಾಧ್ಯಕ್ಷೆ ನಾಗವೇಣಿ, ಸದಸ್ಯರಾದ ರಮೇಶ್, ದೇವಿರಮ್ಮ, ಸುನೀತ, ಮಂಜುಳಾ, ಸುಮಿತ್ರ, ಶಕುಂತಲಾ, ಪುಷ್ಪ, ಭವ್ಯ, ಪೋಷಕರಾದ ಕರಿಬಸಪ್ಪ, ಬಾಳಪ್ಪ,ರೂಪ, ನಿರ್ಮಲ ಶಾಲೆಯ ಶಿಕ್ಷಕರು ಹಾಗೂ ಶಾಲಾ ಅಕ್ಷರ ದಾಸೋಹ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

 

Leave a Reply

Your email address will not be published. Required fields are marked *

error: Content is protected !!