ಹೊಲದಲ್ಲಿ ಯುವಕನ ಮೇಲೆ ಕರಡಿ ದಾಳಿ
ಜಗಳೂರು: ಯುವಕನೋರ್ವನ ಮೇಲೆ ಕರಡಿ ದಾಳಿ ನಡೆಸಿರುವ ಘಟನೆ ಮಂಗಳವಾರ ತಾಲ್ಲೂಕಿನ ಕೆಳಗೋಟೆ ಗ್ರಾಮದಲ್ಲಿ ನಡೆದಿದ್ದು, ಗಾಯಗೊಂಡ ಯುವಕನನ್ನು ಜಗಳೂರಿನ ಸಾರ್ವಜನಿಕ ಆಸ್ಪತ್ರೆ ದಾಖಲಿಸಲಾಗಿದೆ.
ಗ್ರಾಮದ ಮಾರುತಿ (26) ಎಂಬ ಯುವಕನ ಮೇಲೆ ಕರಡಿ ದಾಳಿ ನಡೆಸಿದ್ದು, ಬೆಳಗಿನಜಾವ ಯುವಕ ಹೊಲಕ್ಕೆ ನೀರು ಕಟ್ಟಲು ಹೋಗಿದ್ದ ಈ ಸಮಯದಲ್ಲಿ ಕರಡಿ ದಾಳಿ ನಡೆಸಿದೆ. ಸಮಯಕ್ಕೆ ಸರಿಯಾಗಿ ಅಲ್ಲಿದ್ದ ಸ್ಥಳಿಯರು ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಗ್ರಾಮದಲ್ಲಿ ಈಗಾಗಲೇ ಅನೇಕ ಬಾರಿ ಕರಡಿ ಜನರ ಮೇಲೆ ಹಾಗೂ ಹೊಲಗಳಲ್ಲಿ ಬೇಳದಿದ್ದ ಬೆಳೆ ಮೇಲೆ ದಾಳಿನಡೆಸಿದ್ದು, ಸಂಬಂಧಪಟ್ಟ ಅಧಿಕಾರಿಗಳು ಕರಡಿ ದಾಳಿ ನಡೆಸಿದ್ದು, ಇದಕ್ಕೆ ಸಂಭದಪಟ್ಟ ಅಧಿಕಾರಿಗಳು ಕಡಿವಾಣ ಹಾಕುತ್ತಿಲ್ಲ. ಸ್ಥಳೀಯರು ಕೂಡಲೇ ಕ್ರಮ ವಹಿಸುವಂತೆ ಒತ್ತಾಯಿದ್ದಾರೆ.