ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯರಿಗೆ ಝೆಡ್ ಭದ್ರತೆ.! ಅಧಿಕಾರಿಗಳು ಸಿಬ್ಬಂದಿ ಸೇರಿ 21 ಮಂದಿ ನಿಯೋಜನೆ

ಬೆಂಗಳೂರು : ಮಾಜಿ ಸಿಎಂ ಹಾಗೂ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಸರ್ಕಾರ ಝೆಡ್ ಸೆಕ್ಯೂರಿಟಿ ನೀಡಿದೆ. ಅಧಿಕಾರಿಗಳು ಹಾಗೂ ಸಿಬ್ಬಂದಿ ಸೇರಿದಂತೆ 21 ಮಂದಿಯನ್ನ ನಿಯೋಜನೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಸಿದ್ದರಾಮಯ್ಯ ಅವರು ಕಳೆದ ಗುರುವಾರ ಕೊಡಗು ಜಿಲ್ಲೆಗೆ ನೆರೆ ವೀಕ್ಷಣೆಗಾಗಿ ತೆರಳಿದ್ದರು. ಈ ವೇಳೆ ಬಿಜೆಪಿ ಕಾರ್ಯಕರ್ತರು ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದು ಆಕ್ರೋಶ ವ್ಯಕ್ತಪಡಿಸಿದ್ದರು.
ಕೊಡಗಿನಲ್ಲಿ ನಡೆದ ಘಟನೆಗೆ ಸಿಎಂ ಬೊಮ್ಮಾಯಿ ಸಿದ್ದರಾಮಯ್ಯ ಅವರಿಗೆ ಹೆಚ್ಚಿನ ಭದ್ರತೆ ನೀಡುವ ಭರವಸೆ ನೀಡಿದ್ದರು. ಅಲ್ಲದೆ ನನ್ನ ವೀಕ್ಷಣೆಗೆ ತೆರಳಿದ್ದ ಸಿದ್ದರಾಮಯ್ಯ ಅವರ ಭದ್ರತೆ ಕುರಿತು ಟೀಕೆಗಳು ಹೆಚ್ಚಾಗಿದ್ದವು. ಎಲ್ಲೆಲ್ಲಿ ನೆರೆ ವೀಕ್ಷಣೆ ತೆರಳಿದ್ದರು ಅಲ್ಲಲ್ಲಿ ಭದ್ರತೆಯನ್ನು ಯೋಜನೆ ಮಾಡಲಾಗಿತ್ತು ಆದರೂ ಪ್ರತಿಭಟನೆ ಮೊಟ್ಟೆ ಎಸೆತ ಪರಿಣಾಮ ಹಲವು ಟೀಕೆಗಳು ಸರ್ಕಾರದ ವಿರುದ್ಧ ಕೇಳಿ ಬಂದಿದ್ದವು. ಇದೀಗ ಮಾಜಿ ಸಿಎಂಗಳ ಝೆಡ್ ಶ್ರೇಣಿಯ ಭದ್ರತೆ ಒದಗಿಸಿ ಸರ್ಕಾರ ಹೊಸ ಆದೇಶ ಹೊರಡಿಸಿದೆ.
ಸಿದ್ದರಾಮಯ್ಯ ಅವರಿಗೆ ಅಧಿಕಾರಿಗಳು ಮತ್ತು ಸಿಬ್ಬಂದಿ ಸೇರಿ ಒಟ್ಟು 21 ಮಂದಿಯನ್ನು ಭದ್ರತೆಗಾಗಿ ನೀಡಲಾಗಿದೆ. ಮೂರು ಪಾಳ್ಯದಲ್ಲಿ ಭದ್ರತೆ ನೀಡಲಾಗಿದ್ದು ಎಲ್ಲಿ ಹೋದರು ಅಲ್ಲಿ ಸೂಕ್ತ ಭದ್ರತೆ ಒದಗಿಸುವ ದೃಷ್ಟಿಯಿಂದ ನಿಯೋಜನೆ ಮಾಡಲಾಗಿದೆ.
ಬೆಂಗಳೂರಿನಿಂದ ಹೊರಗೆ ಹೋಗುವ ವೇಳೆ ಹೈವೇ ರಸ್ತೆ ರಸ್ತೆಗಳು ಹಾಗೂ ಪೆಟ್ರೋಲಿಂಕ್ ಸ್ಥಳಗಳಲ್ಲಿ ಹೆಚ್ಚಿನ ಭದ್ರತೆ ಒದಗಿಸಬೇಕು ಎಂದು ರಾಜ್ಯ ಸರ್ಕಾರ ಹೇಳಿದೆ. ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಮಾಜಿ ಸಿಎಂಗಳದ ಸಿದ್ದರಾಮಯ್ಯ, ಯಡಿಯೂರಪ್ಪ ಹಾಗೂ ಕುಮಾರಸ್ವಾಮಿಗೆ ಹೆಚ್ಚಿನ ಭದ್ರತೆ ನೀಡಲಾಗಿದೆ.