zameer ahmed; ಸಿಎಂ ಸೀಟ್ ಖಾಲಿ ಇಲ್ಲ, ಇನ್ನು 5 ವರ್ಷ ಸಿದ್ದುನೇ ಸಿಎಂ: ಸಚಿವ ಜಮೀರ್ ಅಹಮದ್

ದಾವಣಗೆರೆ, ಅ.31: ಆಪರೇಷನ್ ಕಮಲ ಅಸಾಧ್ಯ ಎಂದ ಸಚಿವ ಜಮೀರ್ ಅಹ್ಮದ್ (Zameer Ahmed) ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ್ದು, ಸಿಎಂ ಸೀಟ್ ಖಾಲಿ ಇಲ್ಲ, ಇನ್ನು 5 ವರ್ಷ ಸಿದ್ದುನೇ ಸಿಎಂ ಎಂದು ಹೇಳಿದರು.

ದಾವಣಗೆರೆಯಲ್ಲಿ ಮಾತನಾಡಿದ ಅವರು, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹಗಲು ಕನಸು ಕಾಣ್ತಿದ್ದಾರೆ. 56 ಜನ ಎಂಎಲ್ಎ ಗಳನ್ನು ಕರೆದುಕೊಂಡು ಹೋಗಿ ಆಪರೇಷನ್ ಮಾಡೋದು ಸಾಧ್ಯನಾ? ರಮೇಶ್ ಜಾರಕಿಹೊಳಿ ಅವರನ್ನೇ ಕೇಳಿ ಆಪರೇಷನ್ ಎಷ್ಟು ಕಷ್ಟ ಅಂತ ಎಂದು ಪ್ರಶ್ನಿಸಿದರು.

Siddaramaiah; ವಿಶ್ವ ಮಾನವ ಸಂಸ್ಕೃತಿಯನ್ನು ಬಂಟ ಸಮುದಾಯ ಆಚರಿಸುತ್ತಿದೆ: ಮುಖ್ಯಮಂತ್ರಿ

ಸಮ್ಮಿಶ್ರ ಸರ್ಕಾರದಲ್ಲಿ 17 ಜನರನ್ನು ಕರೆದುಕೊಂಡು ಹೋಗಲು ಎಷ್ಟು ಎಷ್ಟು ಸರ್ಕಸ್ ಮಾಡಿದ್ದಾರೆ. ರಮೇಶ್ ಹೈಕಮಾಂಡ್ ಬಳಿ ಬೇಳೆ‌ ಬೇಯಿಸಿಕೊಳ್ಳಲು ಹಿಂಗೆ ಮಾತಾಡ್ತಿದ್ದಾರೆ ರಮೇಶ್ ಬಿಜೆಪಿಲೀ ಇರೋ ಶಾಸಕರನ್ನು ಉಳಿಸಿಕೊಳ್ಳಲಿ. ಬಿಜೆಪಿ ಶಾಸಕರು ಕಾಂಗ್ರೆಸ್ ಗೆ ಬರಲು ಒಂದ್ ಕಾಲಿನಲ್ಲಿ ನಿಂತಿದ್ದಾರೆ ಮೊದಲು ಅವರ‌ ಬಗ್ಗೆ ಗಮನ ಹರಿಸಲಿ ಎಂದು ಹೇಳಿದರು.

Leave a Reply

Your email address will not be published. Required fields are marked *

error: Content is protected !!