ಜಿಲ್ಲಾ ಕಾಂಗ್ರೆಸ್ ನಿಂದ ಮಾಜಿ ಸಿಎಂ ಸಿದ್ದರಾಮಯ್ಯ ಜನ್ಮದಿನಾಚರಣೆ

ದಾವಣಗೆರೆ:ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕರಾದ ಸಿದ್ದರಾಮಯ್ಯನವರ 74ನೇ ಜನ್ಮದಿನದ ಅಂಗವಾಗಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರ ದೇವತೆ ಶ್ರೀ ದುರ್ಗಾಂಬಿಕಾ ದೇವಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಜನ್ಮದಿನವನ್ನು ಆಚರಿಸಿದರು.
ಪೂಜೆ ನಂತರ ಕರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕರ್ಯದರ್ಶಿ ದಿನೇಶ್ ಕೆ.ಶೆಟ್ಟಿ, ಸಿದ್ದರಾಮಯ್ಯನವರು ಅಹಿಂದ ವರ್ಗಕ್ಕಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದು ರಾಜ್ಯದ ಮನೆ-ಮನೆಗೆ ಪರಿಚಯವಾದರು. ಅವರ ಎಲ್ಲಾ ಯೋಜನೆಗಳು ಬಡವರ ಪರ ಇದ್ದವು. ಆದರೆ, ಇಂದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನಪರ ಯೋಜನೆಗಳನ್ನು ತೆಗೆದು ಹಾಕುವ ಪ್ರಯತ್ನಕ್ಕೆ ಮುಂದಾಗಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೆಪಿಸಿಸಿ ವಕ್ತಾರ ಡಿ.ಬಸವರಾಜ್ ಮಾತನಾಡಿ, ಸಿದ್ದರಾಮಯ್ಯನವರು ಭ್ರಷ್ಟರ ವಿರುದ್ಧ ಹೋರಾಟ ನಡೆಸುವ ಮೂಲಕ ರಾಜ್ಯದಲ್ಲಿ 5 ವರುಷಗಳ ಸುವರ್ಣಯುಗದ ಆಡಳಿತ ನಡೆಸಿ ಜನಸಾಮಾನ್ಯರ ಕಷ್ಟಕ್ಕೆ ಸ್ಪಂದಿಸಿದವರು. ಅವರು ನರ್ಕಾಲ ಬಾಳಲಿ ಎಂದು ಹಾರೈಸಿದರು.
ಮಹಾನಗರ ಪಾಲಿಕೆ ವಿಪಕ್ಷ ನಾಯಕ ಎ.ನಾಗರಾಜ್, ಸದಸ್ಯ ವಿನಾಯಕ ಪೈಲ್ವಾನ್, ಮುಖಂಡರುಗಳಾದ ಜಮ್ನಳ್ಳಿ ನಾಗರಾಜ್, ಅನಿಲ್ ಕುಮಾರ್, ಮಹ್ಮದ್ ಬಾಷಾ, ಯುವರಾಜ್, ಸುರೇಶ್ ಜಾಧವ್, ಅಬ್ದುಲ್ ಜಬ್ಬಾರ್, ಮಂಜುನಾಥ್, ರಾಕೇಶ್ ಜಿ, ಮಹ್ಮದ್ ಜಿಕ್ರಿಯಾ ಮತ್ತಿತರರಿದ್ದರು.